ಕನ್ನಡಲೋಕ

೧೦ ಮುಂದೆ› ಕೊನೆ»


ಸಮುದ್ರ ಮಥನ 6: ಕ್ರೋಧವೆಂಬುದು ದೋಷ ಮಾತ್ರವಲ್ಲ, ಗುಣವೂ ಹೌದು
PARYAYA - ಬುಧವಾರ ೦೨:೪೪, ಅಕ್ಟೋಬರ್ ೧೫, ೨೦೦೮


ಇಂದಿನ ಇತಿಹಾಸ History Today ಅಕ್ಟೋಬರ್ 16
PARYAYA - ಬುಧವಾರ ೦೨:೩೬, ಅಕ್ಟೋಬರ್ ೧೫, ೨೦೦೮


'ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!'
ಸಂಪದ - 'ಹೊಸ ಚಿಗುರು, ಹಳೆ ಬೇರು' - ಬುಧವಾರ ೦೨:೦೦, ಅಕ್ಟೋಬರ್ ೧೫, ೨೦೦೮

ಮುಂಬೈಯಲ್ಲಿರುವ ವಲಸಿಗರು ಥ್ಯಾಕ್ರೆಯ ಸಿಂಹಗರ್ಜೆನೆಗೆ ಬೆಚ್ಚಿಬಿದ್ದರು. ಸ್ಥಳೀಯ ನೆಲ, ಸಂಸ್ಕೃತಿ, ಭಾಷೆ, ಭಾವನೆಗಳನ್ನು ಗೌರವಿಸುವ ಪಾಠ ಕಲಿತರು. ಆದರೆ ಕನ್ನಡಿಗರು ಬೆಂಗಳೂರಿಗೆ ಬಂದ ವಲಸಿಗರಿಗೆ ಎಲ್ಲರೂ ನಮ್ಮ ಜನರಲ್ಲವೇ ಎಂದು ಸಹಿಷ್ಣುತೆ ತೋರಿಸಿದರು. ಸಿಕ್ಕಿದ್ದೇನು? "www.leavingbangalore.com" ಅಭಿಯಾನ! ಸ್ಥಳೀಯ ನೆಲ, ಸಂಸ್ಕೃತಿ, ಭಾಷೆ, ಭಾವನೆಗಳ ಅವಹೇಳನ. ಎಷ್ಟೋ ಜನರಿಗೆ ಬೆಂಗಳೂರು ಕಲ್ಪವೃಕ್ಷವಿದ್ದಂತೆ; ಮೊದಲ ನೌಕರಿ, ಮೊದಲ ಸಂಬಳ, ಮೊದಲ ಕಾರು, ಮೊದಲ ಮನೆ, ಎಲ್ಲಕ್ಕಿಂತ ಮಿಗಿಲಾಗಿ ತಾಳ್ಮೆಯುಳ್ಳ ಕನ್ನಡಿಗರ ಸ್ನೇಹ-ವಿಶ್ವಾಸಗಳೆಲ್ಲ ದೊರೆತದ್ದು ವಲಸಿಗರ ಸೌಭಾಗ್ಯವಲ್ಲವೇ? ಇದನ್ನು ಮರೆತ ಕೆಲ ಕಿಡಿಗೇಡಿ ವಲಸಿಗರು ಬೆಂಗಳೂರಿನ ಮೂಲಭೂತ ಸೌಕರ್ಯಗಳನ್ನು ತಿರಸ್ಕೃತ ಮನೋಭಾವನೆಯಿಂದ ನೋಡುತ್ತಿರುವುದು ಅವರ ಸಂಕುಚಿತ ಸ್ವಭಾವಕ್ಕೆ ಹಿಡಿದ ಕೈಗನ್ನಡಿಯಾಗಿದೆ.  ಮುಂದೆ ಓದಿ »


ದೊಡ್ಡವರ ದೊಡ್ಡತನ
ಸಂಪದ - 'ಹೊಸ ಚಿಗುರು, ಹಳೆ ಬೇರು' - ಬುಧವಾರ ೦೧:೦೯, ಅಕ್ಟೋಬರ್ ೧೫, ೨೦೦೮

ಮೊನ್ನೆ ಒಂದು ಒಳ್ಳೇ ಅವಕಾಶ ಸಿಕ್ಕಿತು. ಇಲ್ಲಿ ಕಚೇರಿಯೊಂದಕ್ಕೆ ಬಂದಿದ್ದ ಒಬ್ಬ ಸಂಗೀತಗಾರರು ನಮ್ಮ ಗೆಳೆಯರೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದರು. ಆ ನೆವದಲ್ಲಿ ನಾವು ಕೆಲವು ಸಂಗೀತಾಸಕ್ತ ಕುಟುಂಬಗಳು ನಮ್ಮ ಗೆಳೆಯರ ಮನೆಯಲ್ಲಿ ಒಟ್ಟು ಸೇರಿ ಅವರೊಡನೆ ಹರಟೆ ಹೊಡೆಯುತ್ತಾ - ಊಟ ಮಾಡುವ ಅವಕಾಶ ಸಿಕ್ಕಿತು.  ಮುಂದೆ ಓದಿ »


ಕೈ ಕೊಟ್ಟ ಜೆಟ್ ಏರ್
ಸಂಪದ - 'ಹೊಸ ಚಿಗುರು, ಹಳೆ ಬೇರು' - ಬುಧವಾರ ೦೧:೦೫, ಅಕ್ಟೋಬರ್ ೧೫, ೨೦೦೮

ಒಂದಾದ ಮೇಲೆ ಒಂದು ದೇಶೀಯ ಖಾಸಗಿ ಹಾಗು MNC ಗಳ ಬಣ್ಣ ಬಯಲಾಗೊ ಕಾಲ ಈಗ ಬರ್ತಾ ಇದೆ.
ಮೊದಲನೇ ಕಂತು ಜೆಟ್ ಏರ್ !!

೧೯೦೦ ಜನರನ್ನ ಮನೆಗೆ ಕಳಿಸಿ ಕೈ ತೊಳೆದುಕೊಂಡು ಕೂತಿದೆ.
ಜೆಟ್ ನ ಕತೆ ಏನೇ ಇರಲಿ...ದೂರಾಲೋಚನೆ ಇಲ್ಲದೆ ಸಾವಿರಾರು ಜನರನ್ನ ಕೆಲಸಕ್ಕೆ ತೆಗೆದುಕೊಂಡು ಈಗ ಒಂದು ದಿನದ ನೋಟೀಸೂ ಕೊಡದೆ ಹೀನಾಯವಾಗಿ ತೆಗೆದಿದ್ದು ಬೇಜವಾಬ್ದಾರಿಯ ಪರಮಾವಧಿ.  ಮುಂದೆ ಓದಿ »


ಜಂಬೂ ಸವಾರಿ ಎಂದ್ರೆ ನಮ್ಮೂರ ತೇರು !
ಚೆಂಡೆಮದ್ದಳೆ - ಬುಧವಾರ ೧೨:೪೫, ಅಕ್ಟೋಬರ್ ೧೫, ೨೦೦೮

ದಸರೆಯ ಸಂಭ್ರಮ ಮುಗಿಯಿತು. ಸುಮಾರು ಹದಿನೈದು ದಿನಗಳಿಂದ ಬ್ಲಾಗಿನತ್ತ ತಲೆಯೇ ಹಾಕಿರಲಿಲ್ಲ. ನಮ್ಮೂರಿನಲ್ಲಿ ದಸರೆಯ ಸಂಭ್ರಮ ಎಲ್ಲರನ್ನೂ-ಎಲ್ಲವನ್ನೂ ಆವರಿಸಿತ್ತು. ಅದರಲ್ಲೂ ಸುದ್ದಿಜೀವಿಯಾದ ನನಗೆ ಹಾಗೆ ಆವರಿಸಿಕೊಂಡ ಸಂಭ್ರಮವನ್ನು ಮೊಗೆ ಮೊಗೆದು ಎಲ್ಲರಿಗೂ ನೀಡಬೇಕಾದ ಹೊಣೆಗಾರಿಕೆಯಿತ್ತು. ನನ್ನ ಸಹೋದ್ಯೋಗಿಗಳು ಅಂಥದೊಂದು ಕಾರ್‍ಯವನ್ನು ಅತ್ಯಂತ ಉಲ್ಲಸಿತವಾಗಿ ಮಾಡಿದರು. ಬಹಳ ವಿಭಿನ್ನವಾಗಿ ದಸರೆಯ ಸಂಭ್ರಮವನ್ನು ನಮ್ಮ ಬೊಗಸೆಯಲ್ಲಿ ಹಿಡಿದು ಕೊಟ್ಟೆವು ಎನ್ನಲಡ್ಡಿಯಿಲ್ಲ. ಇದು ನನಗೆ ಎರಡನೇ ದಸರೆ. ಕಳೆದ ದಸರೆಯಷ್ಟೊತ್ತಿಗೆ  ಇದೇ ಜಂಬೂಸವಾರಿಯ ಊರಿನಲ್ಲಿದ್ದೆ. ದಸರೆಯನ್ನು ಬಹಳ ವಿಶಿಷ್ಟವಾಗಿ ನೋಡುವ ಪ್ರಯತ್ನ  ಮಾಡಿದೆವು. ಅದೆಲ್ಲವೂ [...]


ಕಪ್ಪು ಬಿಳುಪು-೫೩
ಕಪ್ಪು ಬಿಳುಪು - ಬುಧವಾರ ೧೨:೦೧, ಅಕ್ಟೋಬರ್ ೧೫, ೨೦೦೮


ಆಶ್ವಯುಜ ಶುದ್ಧ ಮಹಾನವಮಿ ಬರಲಂದು - ಪೂರ್ಣ ಸಾಹಿತ್ಯ ಬೇಕು
ಸಂಪದ - 'ಹೊಸ ಚಿಗುರು, ಹಳೆ ಬೇರು' - ಬುಧವಾರ ೧೧:೫೦, ಅಕ್ಟೋಬರ್ ೧೫, ೨೦೦೮

ನಮ್ಮಮ್ಮಂಗೆ ಈ ಪದ್ಯದ ಪೂರ್ಣ ಪಾಠ ಬೇಕಂತೆ...

ಆಶ್ವಯುಜ ಶುದ್ಧ ಮಹಾನವಮಿ ಬರಲಂದು
ಲೇಸಾಗಿ ಹರಸಿದರು ಬಾಲಕರು ಬಂದು
ಈಶ ನಿಮಗತ್ಯಧಿಕ ಸುಖವ ಕೊಡಲೆಂದು
ಲೇಸಾಗಿ ಹರಸಿದರು ಬಾಲಕರು ಬಂದು....(ಮುಂದೆ ಏನು?)

ಗೊತ್ತಿದ್ದವರು ತಿಳಿಸ್ತೀರ...ಮೇಲಿನ ಸಾಲುಗಳಲ್ಲಿ ತಪ್ಪಿದ್ದರೆ ತಿದ್ದಿ...

--ಶ್ರೀ


Suddigiduga Daily 16-10-2008
ಚಿತ್ರದುರ್ಗದ ಹೆಮ್ಮೆಯ ದೈನಿಕ ಮತ್ತು ಜಿಲ್ಲೆಯ ಪ್ರಪ್ರಥಮ ಅಂತರ್ಜಾಲ ದಿನಪತ್ರಿಕೆ - ಬುಧವಾರ ೧೧:೩೪, ಅಕ್ಟೋಬರ್ ೧೫, ೨೦೦೮




Suddigiduga Daily 16-10-2008


ಚಿತ್ರ ೭೪
ಚಿತ್ರಕವನ - ಬುಧವಾರ ೧೧:೨೪, ಅಕ್ಟೋಬರ್ ೧೫, ೨೦೦೮


ರಾಷ್ಟ್ರಪತಿ ಬೆನ್ನಟ್ಟಿದ ನಿಗೂಢ ಕಾರು
ಸಂಪದ - 'ಹೊಸ ಚಿಗುರು, ಹಳೆ ಬೇರು' - ಬುಧವಾರ ೧೦:೫೫, ಅಕ್ಟೋಬರ್ ೧೫, ೨೦೦೮

ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಇವರನ್ನು ಹತ್ಯೆ ಮಾಡುವುದಾಗಿ ಮೇಲಿಂದ ಮೇಲೆ ಇ-ಮೈಲ್ ಕಳಿಸಿದ ಮೇಲೆ ರಕ್ಷಣೆಯನ್ನು ಬಿಗಿಗೊಳಿಸಿದ ರಕ್ಷಣಾಧಿಕಾರಿಗಳು ಪುಣೆಯಲ್ಲಿ ರಾಷ್ಟ್ರಪತಿಯವರು ರಾಜಭವನಕ್ಕೆ ತೆರಳುವ ೪೫ ನಿಮಿಷಗಳ ಮೊದಲು ನಕಲಿ ರಾಷ್ಟ್ರಚಿಹ್ನೆಯನ್ನು ಹಾಕಿ ಅವರ ಕಾರನ್ನು ಹಿಂಬಾಲಿಸುತ್ತಿರುವ ಆ ಕಾರನ್ನು ಅಡ್ಡಗಟ್ಟಿ ತಪಾಸಣೆ ಮಾಡುವಾಗ ಅದರಲ್ಲಿದ್ದ ಇಬ್  ಮುಂದೆ ಓದಿ »


ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
ಸಂಪದ - 'ಹೊಸ ಚಿಗುರು, ಹಳೆ ಬೇರು' - ಬುಧವಾರ ೧೦:೪೫, ಅಕ್ಟೋಬರ್ ೧೫, ೨೦೦೮

 ಮುಂದೆ ಓದಿ »


ಅರಿವಿಗೇನರಿವು...
ನೆನಪು ಕನಸುಗಳ ನಡುವೆ - ಬುಧವಾರ ೧೦:೦೦, ಅಕ್ಟೋಬರ್ ೧೫, ೨೦೦೮

ಕುಂಚಕರಿವಿಹುದೆ ತಾ ಬಳಿವ ಬಣ್ಣದ್ದು
ಹರಿವ ಜಲಕೇನರಿವು ತನ್ನಂಚೆ ವಿಳಾಸ
ಆಗಸವು ಅರಿತಿಹುದೆ ತನ್ನಾದಿ ಅಂತ್ಯವನು
ನಿನಗೆ ಅರಿವಿತ್ತೆ ಈ ಹೊಸಿಲು ನಿನದೆಂದು

ಮೊಗ್ಗರಿತು ಅರಳುವುದೆ ಹೂವಾಗಿ ತಾನು
ಮೊಳಕೆಗೇನರಿವು ತಾನೊಂದು ಎಲೆಯೆಂದು
ಸಸಿಗೆ ಅರಿವಿಹುದೇ ನಾಳೆ ತಾ ಮರವೆಂದು
ಹುಟ್ಟು ತಾ ಹುಟ್ಟುವುದೆ ಮರಣವನು ಅರಿತು


ಬತ್ತಿಗರಿವಿಹುದೆ ತಾ ಬೆಳಗುತಿಹೆನೆಂದು
ತೈಲಕೇನರಿವು ದೀಪವೇ ತಾನೆಂದು
ಮೌನ ಅರಿತಿಹುದೆ ತನ್ನರ್ಥವೇನೆಂದು
ಮಾತರಿತು ಮುಗಿವುದೇ ಮೌನ ತಾನೆಂದು

ಸತ್ಯಕ್ಕೆ ಅರಿವಿಹುದೆ ತಾನೊಂದು ಸುಳ್ಳೆಂದು
ಸುಳ್ಳಿಗೇನರಿವು ಶೂನ್ಯ ತಾನೆಂದು
ಆಳಕ್ಕೆ ಅರಿವಿಹುದೆ ತನ್ನೆತ್ತರದ ಮಿತಿ
ಎತ್ತರವು ಅಳೆಯುವುದೆ ತನ್ನಾಳವನ್ನು

ನಿನಗರಿವೆ ನಿನ್ನರ್ಥಕೆ ಅರ್ಥವೇನೆಂದು
ಇಂದುನಾಳೆಗಳಂಚಿಗೆ ಹೆಸರು ಏನೆಂದು
ಅನಂತಕೂ ಅಂತ್ಯವೊಂದಿರಲೇಬೇಕು
ಪ್ರತಿ ಅಂತ್ಯಕೂ ಆದಿಯೊಂದಿರಲೇಬೇಕು


ವಸುಧೇಂದ್ರರ ಸಂವೇದನಾ ಲೋಕ
ಸಲ್ಲಾಪ - ಬುಧವಾರ ೦೯:೧೬, ಅಕ್ಟೋಬರ್ ೧೫, ೨೦೦೮

ವಸುಧೇಂದ್ರರು ಈವರೆಗೆ ಮೂರು ಕಥಾಸಂಕಲನಗಳನ್ನು ಪ್ರಕಟಿಸಿದ್ದಾರೆ:
(೧) ಮನೀಷೆ
(೨) ಚೇಳು
(೩) ಯುಗಾದಿ.

ಈ ಮೂರು ಕಥಾಸಂಕಲನಗಳಲ್ಲಿ ಒಟ್ಟು ೩೭ ಕಥೆಗಳಿವೆ.
ಈ ಮೂವತ್ತೇಳೂ ಕತೆಗಳನ್ನು ಓದಿದಾಗ ಅವುಗಳಲ್ಲಿ ಮೂರು ಮೂಲಲಕ್ಷಣಗಳನ್ನು ಗುರುತಿಸಬಹುದು:

(೧) ವಸುಧೇಂದ್ರರ ಕತೆಗಳಲ್ಲಿ ಬರುವ ಸಮಾಜಗಳು ಎರಡು ತರಹದವು . ಒಂದು ಸಾಂಪ್ರದಾಯಕ ಸಮಾಜ; ಮತ್ತೊಂದು ಆಧುನಿಕ ಸಮಾಜ. ಇವೆರಡೂ ಸಮಾಜಗಳಲ್ಲಿ ವಸುಧೇಂದ್ರರು ಗುರುತಿಸುವ ಸಾಮಾನ್ಯ ಅಂಶವೆಂದರೆ ನಿಷ್ಕರುಣಿಯಾದ ಸಮಾಜವ್ಯವಸ್ಥೆ. ಕತೆಯ ಹಿನ್ನೆಲೆ ಸಾಂಪ್ರದಾಯಕ ಸಮಾಜದ್ದೇ ಇರಲಿ ಅಥವಾ ಆಧುನಿಕ ಸಮಾಜದ್ದೇ ಇರಲಿ, ಈ ಸಮಾಜವ್ಯವಸ್ಥೆಯು ಎಷ್ಟು ನಿರ್ದಯದಿಂದ ಅಸಹಾಯಕರನ್ನು ಹೊಸಕಿ ಹಾಕುತ್ತದೆ ಎನ್ನುವದು ಇಲ್ಲಿಯ ಕತೆಗಳ ಒಂದು ಮೂಲ ಲಕ್ಷಣ.

(೨) ಸಾಂಪ್ರದಾಯಕ ಸಮಾಜದ ಇಂತಹ ವ್ಯವಸ್ಥೆಯಲ್ಲಿ ತೊಳಲಾಡುತ್ತಿರುವ ಅಸಹಾಯಕ ಜೀವಿಗಳಲ್ಲಿ ಉಳಿದಿರುವ ಮೌಲ್ಯನಿಷ್ಠೆಯ ಚಿತ್ರಣವು ಇಲ್ಲಿಯ ಕತೆಗಳ ಎರಡನೆಯ ಮೂಲಲಕ್ಷಣ.

(೩) ಮೂರನೆಯದಾಗಿ ಇಂತಹ ವ್ಯವಸ್ಥೆಯ ಯಲ್ಲಿ ಸಿಲುಕಿ ನಲುಗುತ್ತಿರುವ ಅಸಹಾಯಕ ಜೀವಿಗಳ ಬಗೆಗೆ ವಸುಧೇಂದ್ರರಿಗೆ ಇರುವ ಅನುಕಂಪ.

ಅಸಹಾಯಕರ ಕತೆಗಳನ್ನು ಬರೆದಿರುವವರಲ್ಲಿ ವಸುಧೇಂದ್ರರು ಮೊದಲಿಗರೇನೂ ಅಲ್ಲ. ಕನ್ನಡದ ಶ್ರೇಷ್ಠ ಕತೆಗಾರರಾದ ದೇವನೂರು ಮಹಾದೇವ ಸಹ feudal ಸಮಾಜವ್ಯವಸ್ಥೆಯಲ್ಲಿ ಸಿಲುಕಿ ನಲುಗುತ್ತಿರುವ ಪಾತ್ರಗಳನ್ನು ಸೃಷ್ಟಿಸಿದ್ದಾರೆ. ಅವರ “ಮಾರಿಕೊಂಡವರು” ಕತೆ ವಿಶ್ವದ ಅತ್ಯುತ್ತಮ ಕತೆಗಳಲ್ಲಿ ಒಂದು ಎಂದು ಹೇಳಬಹುದು. ಆದರೆ ಈ ಕತೆ ಸಾಮಾಜಿಕ ವ್ಯವಸ್ಥೆ ನಿರ್ಮಿಸಿದ ಶೋಷಣೆಯನ್ನು ನಿರುದ್ವಿಗ್ನವಾಗಿ ಹೇಳುವ ಕತೆ. ಅಮರೇಶ ನುಗಡೋಣಿಯವರ ಕತೆಗಳನ್ನೂ ಸಹ ಇದೇ ವರ್ಗದಲ್ಲಿ ಸೇರಿಸಬಹುದು.
ಇನ್ನು ರಾಘವೇಂದ್ರ ಖಾಸನೀಸರು ಸಹ ತಮ್ಮ ಎಲ್ಲ ಕತೆಗಳಲ್ಲಿಯೂ ಅಸಹಾಯಕ ಜೀವಿಗಳನ್ನೇ ಮುಖ್ಯ ಪಾತ್ರಗಳನ್ನಾಗಿ ಮಾಡಿದ್ದಾರೆ. ಆದರೆ ಅವರ ಬಹುತೇಕ ಕತೆಗಳಲ್ಲಿ ವೈಯಕ್ತಿಕ ಅಥವಾ ಕೌಟಂಬಿಕ ಸಮಸ್ಯೆಯೇ ಅಸಹಾಯಕತೆಯ ಕಾರಣವಾಗಿದೆ. ಅವರ ಕತೆಗಳಲ್ಲಿ ಕಾಣುವದು ಕರುಣರಸವೇ ಹೊರತು ಸಹಾನುಭೂತಿಯಲ್ಲ.

ದೇವನೂರ ಮಹಾದೇವ, ಅಮರೇಶ ನುಗಡೋಣಿ ಹಾಗು ರಾಘವೇಂದ್ರ ಖಾಸನೀಸರ ಕತೆಗಳಿಗೂ ಮತ್ತು ವಸುಧೇಂದ್ರರ ಕತೆಗಳಿಗೂ ಇರುವ ಮುಖ್ಯ ವ್ಯತ್ಯಾಸವೆಂದರೆ ಸಮಾಜದ ವ್ಯವಸ್ಥೆಯಲ್ಲಿ ಬಲಿಪಶುಗಳಾದವರಿಗೆ ವಸುಧೇಂದ್ರರ ಹೃದಯದಲ್ಲಿ ಉಕ್ಕುತ್ತಿರುವ ಸಹಾನುಭೂತಿ; ಹೀಗಾಗಿ ಅವರ ಕತೆಗಳಲ್ಲಿ ಅನುಕಂಪವೇ ಪ್ರಧಾನ ರಸವಾಗುತ್ತದೆ.

ಈ ಮೇಲಿನ ಮೂರು ಕಥಾಸಂಕಲನಗಳಲ್ಲಿ, ವಸುಧೇಂದ್ರರು ಮೊದಲು ಒಂದು ಸಾಂಪ್ರದಾಯಕ ಸಮಾಜದ ಕತೆಯನ್ನು, ಆನಂತರ ಒಂದು ಆಧುನಿಕ ಸಮಾಜದ ಕತೆಯನ್ನು ಕೊಡುತ್ತಾ ಹೋಗಿದ್ದಾರೆ. ಈ ರೀತಿಯಾಗಿ ತಮ್ಮ ಸಂಕಲನಗಳಲ್ಲಿ ಒಂದು ರೀತಿಯ ಸಮತೋಲನವನ್ನು ಸಾಧಿಸಲು ಯತ್ನಿಸಿದ್ದಾರೆ. ಆದರೆ ಅವರ ಬಹುತೇಕ ಕತೆಗಳಲ್ಲಿ ಸಂಕಟಪಡುವ ಪಾತ್ರವೆಂದರೆ ಒಬ್ಬ ಅಸಹಾಯಕ ಹೆಣ್ಣು ಮಗಳು.

“ಮನೀಷೆ” ಕಥಾಸಂಕಲನದ ಮೊದಲ ಕಥೆಯಾದ “ನಮ್ಮ ವಾಜೀನ್ನೂ ಆಟಕ್ಕೆ ಸೇರಿಸ್ಕೊಳ್ರೋ” ಕತೆಯನ್ನು ಉದಾಹರಣೆಗೆ ತೆಗೆದುಕೊಳ್ಳಬಹುದು. ಒಂದು ಹಳೆಯ ಕಾಲಘಟ್ಟದ ಬ್ರಾಹ್ಮಣ ಸಮಾಜದ ಚಿತ್ರಣ ಇಲ್ಲಿದೆ.
ಮೈಗೆ ಅಲ್ಲಲ್ಲಿ ಬಿಳುಪು ಹತ್ತುತ್ತಿರುವ ತನ್ನ ಮಗನ ಭವಿಷ್ಯದ ಬಗೆಗೆ ಹೌಹಾರಿದ ವಿಧವೆಯ ಕತೆ ಇದು.
ಮಗನ ರೋಗಶಮನಕ್ಕಾಗಿ ಇವಳಿಗೆ ರಾಘವೇಂದ್ರಸ್ವಾಮಿಗಳ ಹರಕೆಯೇ ದಿವ್ಯೌಷಧ.

ನಡು ವಯಸ್ಸಿನಲ್ಲಿಯೆ ಗಂಡನನ್ನು ಕಳೆದುಕೊಂಡ ಬ್ರಾಹ್ಮಣ ಹೆಣ್ಣುಮಗಳೊಬ್ಬಳು ತನ್ನ ಹಾಗು ತನ್ನ ಚಿಕ್ಕ ಮಗನ ಹೊಟ್ಟೆ ತುಂಬಿಸಲು ಅಡುಗೆ ಕೆಲಸವನ್ನಲ್ಲದೆ ಬೇರಾವ ಕೆಲಸ ಮಾಡಬಲ್ಲಳು? ಇವಳಿಗೆ ಅಣ್ಣನೊಬ್ಬನಿದ್ದಾನೆ. ಆದರೆ ಎಲ್ಲ ಅಣ್ಣಂದಿರಂತೆ ಇವಳ ಅಣ್ಣನೂ ಸಹ ತನ್ನ ಹೆಂಡತಿಯ ಕೈಗೊಂಬೆ. ಅವನಿಗೆ ಇವಳ ಮೇಲೆ, ಇವಳ ಮಗನ ಮೇಲೆ ಕನಿಕರವಿರಬಹುದು. ಆದರೆ ಅದು ಪ್ರಯೋಜನಕ್ಕೆ ಬಾರದ ಕನಿಕರ. ಅಲ್ಲದೆ ಬ್ರಾಹ್ಮಣ ಸಮಾಜದ ಕ್ರೂರ ಕಟ್ಟಳೆಗಳು ಬೇರೆ. ಹೀಗಾಗಿ ಅವನೂ ಅಸಹಾಯಕ.

ಈ ಕತೆಯಲ್ಲಿಯ ಬ್ರಾಹ್ಮಣ ಸಮಾಜ ಕೊಳೆಯುತ್ತಿರುವ ಸಮಾಜವಲ್ಲ ; ಈಗಾಗಲೇ ಕೊಳೆತು ಹೋದ ಸಮಾಜ.
ಬಿಳುಪು ಕಾಣುತ್ತಿರುವ ತನ್ನ ಚಿಕ್ಕ ಮಗನಿಗೆ ಬ್ರಾಹ್ಮಣಸಮಾಜದಲ್ಲಿ acceptance ಕೊಡಿಸಲು ಈ ವಿಧವೆ ಸಂಕಟಪಡುತ್ತಿದ್ದಾಳೆ. ಮಠದ ಸ್ವಾಮಿಗಳ ಸಮಾರಂಭದಲ್ಲಿ, ತಾನು ಅಡುಗೆ ಮಾಡಿ, ತನ್ನ ಮಗನ ಕೈಯಿಂದ ನೀರು ಬಡಿಸಲು ಇವಳು ಶತಪ್ರಯತ್ನ ಮಾಡುತ್ತಾಳೆ. ಆದರೆ, ಕೊನೆಗೂ ಸ್ವಾಮಿಗಳ ಬಾಯಿಂದ ಛೀತ್ಕಾರ:
“ ದೇವರ ಪೂಜೆ ಮಾಡುವ ಈ ಕೈಗಳಿಗೆ, ಈ ತೊನ್ನು ಹತ್ತಿದವನ ಸ್ಪರ್ಷವೇ! ತೊಲಗಿಸಿರಿ ಇವನನ್ನು ಇಲ್ಲಿಂದ!”
ಬಹುಶ: ಈ ಮಾತನ್ನು ಈ ಕತೆಯ climax ಎನ್ನಬಹುದು.
(‘ದಯವೇ ಧರ್ಮದ ಮೂಲವಯ್ಯ’ ಎನ್ನುವ ಬಸವಣ್ಣನವರ ಮಾತು ಅಪ್ರಯತ್ನವಾಗಿ ಓದುಗನ ಮನಸ್ಸಿನಲ್ಲಿ ಆಗ ಸುಳಿಯದಿರದು.)

ಆದರೆ ಕತೆಯ ಹೆಚ್ಚುಗಾರಿಕೆ ಕೇವಲ ಈ climaxನಲ್ಲಿ ಮಾತ್ರವಿಲ್ಲ.
ಈ ಭರ್ತ್ಸನೆಯ ನಂತರವೂ ಆ ವಿಧವೆ ಎದೆಗುಂದುವದಿಲ್ಲ. ತನ್ನ ಮಗನ ಒಳಿತಿಗಾಗಿ ಅವಳ ಹೋರಾಟ ನಿಲ್ಲುವದಿಲ್ಲ.
ಕತೆಯ ಹೆಚ್ಚುಗಾರಿಕೆ ಇರುವದು ಇಂತಹ ಪರಾಭವದಲ್ಲೂ ಆ ವಿಧವೆ ತೋರಿಸುವ ಧೈರ್ಯದಲ್ಲಿದೆ. ಸಾಂಪ್ರದಾಯಕ ಸಮಾಜದ ಮೌಲ್ಯಗಳು ಒಬ್ಬ ಅಸಹಾಯಕ ವಿಧವೆಯಲ್ಲಿ ತುಂಬಬಹುದಾದ ಕೆಚ್ಚನ್ನು ತೋರಿಸುವದರಲ್ಲಿ ಈ ಕತೆಯ ಹೆಚ್ಚುಗಾರಿಕೆ ಇದೆ.

ಸಮಾಜದಿಂದ ಹಾಗೂ ತನ್ನ ಸ್ವಂತ ಗಂಡನಿಂದ ಅನ್ಯಾಯಕ್ಕೊಳಗಾಗಿಯೂ, ಕೆಚ್ಚಿನಿಂದ ಬದುಕು ಸಾಗಿಸಿದ ಹೆಣ್ಣು ಮಗಳ ಚಿತ್ರಣ ಸಿಗುವದು “ಚೇಳು” ಕತೆಯಲ್ಲಿ.
ತನ್ನ ಹೆಂಡತಿಗೆ ಮಕ್ಕಳಾಗಲೆಂದು ಭೈರವ ಬಾಬಾನ ಆಶೀರ್ವಾದ ಪಡೆಯಲು, ಮನಸ್ಸಿಲ್ಲದ ಹೆಂಡತಿಯನ್ನು ಕುರಿಯಂತೆ ನೂಕಿದ ಗಂಡ, ಬಾಬಾನ ಕಾಮಲೀಲೆಯನ್ನು ಕಂಡಾಗ, ಸಾರ್ವಜನಿಕವಾಗಿ ಹೆಂಡತಿಯ ಮಾನ ತೆಗೆಯಲು ಹೇಸುವದಿಲ್ಲ. ಅವಳ ತವರುಮನೆಯವರೂ ಸಹ ಈ ‘ಪತಿತೆ’ಯನ್ನು ತಿರಸ್ಕರಿಸುತ್ತಾರೆ. ಆದರೆ ಬಾಬಾ ತಾನು ಮಾಡಿದ ತಪ್ಪನ್ನು ಅರಿತು, ಈ ಅಸಹಾಯಕ ಹೆಣ್ಣು ಮಗಳಿಗೆ ಚೇಳಿನ ಮಂತ್ರವನ್ನು ಅನುಗ್ರಹಿಸಿ ಹೋಗುತ್ತಾನೆ. ಅವಳ ಬದುಕು ಈ ಚೇಳಿನ ಮಂತ್ರದ ಸಹಾಯದಿಂದ ಹೇಗೋ ಸಾಗುತ್ತಿರುತ್ತದೆ. ಆ ಸಮಯದಲ್ಲಿ ಆಧುನಿಕ ವೈಜ್ಞಾನಿಕ ಅನ್ವೇಷಣೆ ಅವಳ ಬದುಕಿಗೆ ಕುಠಾರವಾಗಿ ಬರುತ್ತದೆ. ಈ ಸಮಸ್ಯೆಗೆ ಅವಳು ಕಂಡುಕೊಳ್ಳುವ ಪರಿಹಾರವು ಅಸಹಾಯಕ ಜೀವಿಗಳು ಮೊರೆ ಹೋಗುವ ಏಕೈಕ ಮಾರ್ಗವಾಗಿದೆ. ಇಂತಹ ದುರಂತ ಕತೆಯನ್ನು ಸಹನೀಯವಾಗಿ ಮಾಡುವದು ವಸುಧೇಂದ್ರರ ವಿನೋದಪೂರ್ಣ ಶೈಲಿ.

ವಸುಧೇಂದ್ರರು ಬರೆದ ಇಂತಹ ಸಾಂಪ್ರದಾಯಿಕ ಸಮಾಜದ ಕತೆಗಳಲ್ಲಿಯೇ ಶ್ರೇಷ್ಠವಾದದ್ದು ‘ಚೇಳು’ ಕಥಾಸಂಕಲನದಲ್ಲಿಯ ಕತೆ: “ ಹೊಟ್ಟೆಯೊಳಗಿನ ಗುಟ್ಟು”.

ವಿಧವೆಯೊಬ್ಬಳು ಬ್ರಾಹ್ಮಣ ಕುಟುಂಬವೊಂದರಲ್ಲಿ ಮನೆಕೆಲಸ ಮಾಡುತ್ತ ಬದುಕು ಸಾಗಿಸುತ್ತಿದ್ದಾಳೆ. ದೀರ್ಘ ಕಾಲದ ನಂತರ ಅವಳ ಯಜಮಾನಿಯೂ ಸಹ ವಿಧವೆಯಾಗಿದ್ದಾಳೆ. ಇದಿಷ್ಟು ಕತೆಯಲ್ಲಿ ಬರೆಯದೆ ಇದ್ದ ಹಿನ್ನೆಲೆ.
ಇದೀಗ, ಯಜಮಾನಿಯ ಶ್ರಾದ್ಧದ ಕೊನೆಯ ವಿಧಿಯಾದ ಕಾಕಪಿಂಡದಿಂದ ಕತೆ ಪ್ರಾರಂಭವಾಗುತ್ತದೆ.

ನಗರದಲ್ಲಿ ವಾಸಿಸುತ್ತಿರುವ ಅವಳ ಮಗ ಶ್ರಾದ್ಧಕರ್ಮಕ್ಕಾಗಿ ಮನೆಗೆ ಬಂದಿದ್ದಾನೆ. ಕಾಕಪಿಂಡ ಆಗುತ್ತಿಲ್ಲ.
ಅಲ್ಲಿರುವ ಸಂಬಂಧಿಕರೆಲ್ಲರೂ ಪ್ರಯತ್ನಿಸುತ್ತಾರೆ. ಆದರೂ ಕಾಕಪಿಂಡ ಆಗುವದಿಲ್ಲ.
ಕೊನೆಗೊಮ್ಮೆ ಈ ಮನೆಕೆಲಸದ ಮುದಿ ವಿಧವೆಯಿಂದ ಕಾಕಪಿಂಡ ಆಗುತ್ತದೆ.
ಅವಳು ತನ್ನ ಯಜಮಾನಿಯ ಪಿಂಡಕ್ಕೆ ಹೇಳಿದ್ದೇನು?
ಅದು ಕತೆಯ ಮುಕ್ತಾಯದಲ್ಲಿಯೂ ಗುಟ್ಟಾಗಿಯೇ ಉಳಿಯುತ್ತದೆ.

ಈ ಕತೆಯಲ್ಲಿ, ಈ ಮನೆಗೆಲಸದ ವಿಧವೆಯ ಸಂಕಷ್ಟಗಳ ಬಗೆಗೆ ಎಲ್ಲಿಯೂ ಪ್ರತ್ಯಕ್ಷವಾಗಿ ಹೇಳಿಲ್ಲ. ಆದರೆ ಓರ್ವ ಅಸಹಾಯಕ ವಿಧವೆಯನ್ನು ಅವಳ ಆಶ್ರಯದಾತರು ಹಾಗೂ ಸಮಾಜ ಯಾವ ರೀತಿಯಲ್ಲಿ ಶೋಷಿಸಿರಬಹುದು, ಅವಳ ತಾಪಗಳಿಗೆ ಅವರು ಎಷ್ಟರ ಮಟ್ಟಿಗೆ insensitive ಆಗಿರಬಹುದು ಎನ್ನುವ ಕಲ್ಪನೆ ಓದುಗನ ಚಿತ್ತದಲ್ಲಿ ಕ್ಷಣಮಾತ್ರಕ್ಕೆ ಮಿಂಚುತ್ತದೆ. ಇಷ್ಟಾಗಿಯೂ ದೈಹಿಕವಾಗಿ ಹಾಗೂ ಆರ್ಥಿಕವಾಗಿ ಶೋಷಿತಳಾದ ಆ ಮುದಿ ವಿಧವೆಯ ಹೃದಯದಲ್ಲಿ ಮಿಣುಕುತ್ತಿರುವ ಸಾಂಪ್ರದಾಯಕ ಮೌಲ್ಯಗಳನ್ನು ತೋರಿಸುವದೇ ವಸುಧೇಂದ್ರರ ಮುಖ್ಯ ಗುರಿಯಾಗಿದೆ.

ಅಸಹಾಯಕತೆಯ ಪರಮಾವಧಿಯನ್ನು ನೋಡಬೇಕಾದರೆ , “ ಹುಲಿಗೆ ಕಾಡೇ ರಕ್ಷೆ, ಕಾಡಿಗೆ ಹುಲಿಯೇ ರಕ್ಷೆ ” ಕತೆಯನ್ನು ಓದಬೇಕು. ಈ ಕತೆಯಲ್ಲಿ ಮನೆಯ ಯಜಮಾನ ಮಾನಸಿಕವಾಗಿ ಅತ್ಯಂತ ಬಲಹೀನ ಮನುಷ್ಯ. ಆತನ ಕುಟುಂಬಕ್ಕೆ ಅವನ ಹೆಂಡತಿಯೇ ಧೈರ್ಯದ ಆಧಾರ. ಆದರೆ, ಸಮಾಜದ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಸಾಮರ್ಥ್ಯ ಅವರಲ್ಲಿ ಇಲ್ಲ. ಆದರೆ ಶೋಷಣೆಗೆ ಒಳಗಾಗಿಯೂ, ಗಂಡನಲ್ಲಿ ಹಾಗು ಮಕ್ಕಳಲ್ಲಿ ಧೈರ್ಯವನ್ನು ತುಂಬುವವಳು, ಕುಟುಂಬವನ್ನು ಸಂಬಾಳಿಸಿಕೊಂಡು ಹೋಗುವವಳು ಹೆಂಡತಿಯೇ.

ಸಾಂಪ್ರದಾಯಕ ಸಮಾಜದಲ್ಲಿಯ ಅಸಹಾಯಕ ಹೆಣ್ಣುಮಗಳ ಶ್ರೇಷ್ಠ ಕತೆ ಎಂದರೆ “ಸೀಳು ಲೋಟ”. ಈ ಕತೆ ಇಲ್ಲಿ ತೋರಿಸಿದ ಮೂರು ಸಂಕಲನಗಳಲ್ಲಿ ಇಲ್ಲ. ಇದನ್ನು ಓದಬಯಸುವವರು ದಯವಿಟ್ಟು
ಇಲ್ಲಿನೋಡಿರಿ.
ಈ ಕತೆಯಲ್ಲಿಯೂ ಸಹ ಬಲಹೀನ ಗಂಡ, ಅಸಹಾಯಕ ಅಣ್ಣ ಹಾಗು ನೆರೆಹೊರೆಯವರ ಔದಾರ್ಯದ ಮೇಲೆ ಬದುಕು ಸಾಗಿಸಬೇಕಾದಂತಹ ಹೆಂಗಸಿನ ಕತೆ ಇದು.

ಇಷ್ಟೆಲ್ಲ ಕಾರ್ಪಣ್ಯಗಳ ನಡುವೆಯೂ ಆಕೆ ಸಾಂಪ್ರದಾಯಿಕ ಸಮಾಜ ನೀಡಿದ ಸಂಸ್ಕಾರದ ಮೌಲ್ಯಗಳನ್ನು ಬಿಟ್ಟಿಲ್ಲ. ಕತೆಯ ಕೊನೆಕೊನೆಯಲ್ಲಿ ಅವಳು ತನ್ನ ಮಗನಿಂದ ಆಣೆ ಹಾಕಿಸಿಕೊಳ್ಳುವ ಭಾಗವು ಕತೆಯ ಪರಾಕಾಷ್ಠೆ ಎನ್ನಬಹುದು.
ಫ್ರಾನ್ಸ್ ದೇಶದ ಕತೆಗಾರ ಮೊಪಾಸಾನ ಕತೆಗಳನ್ನು ನೆನಪಿಸುವ ಈ ಕತೆ ಕನ್ನಡದ ಒಂದು ಶ್ರೇಷ್ಠ ಕತೆಯಾಗಿದೆ.

ಈ ಎಲ್ಲ ಕತೆಗಳಲ್ಲಿಬರುವ ಹೆಣ್ಣುಮಕ್ಕಳು ಸಮಾಜದ ನೀತಿಯನ್ನು ಒಪ್ಪಿಕೊಂಡಂತಹ ಸಾಮಾನ್ಯ ಜೀವಿಗಳು. ಸಮಾಜದ ವಿಧಿಗಳನ್ನು ದಾಟದಯೇ, ಕೆಚ್ಚಿನಿಂದ ಬದುಕು ಮಾಡಿದವರು. ಸ್ವತಃ ಶೋಷಣೆಗೆ ಒಳಗಾಗಿದ್ದರೂ, ಮಾನವೀಯತೆಯನ್ನು ಮರೆತವರಲ್ಲ. ಅರ್ಥಾತ್, ಇವಳು ಸಾಮಾನ್ಯ ಭಾರತೀಯ ಹೆಣ್ಣು ಮಗಳು. ತನ್ನ ದುಗುಡ ದುಮ್ಮಾನಗಳು ಏನೇ ಇರಲಿ, ಸಂಪ್ರದಾಯವು ತನಗೆ ಚಿಕ್ಕಂದಿನಿಂದ ಕಲಿಸಿದ ಮೌಲ್ಯಗಳನ್ನು ಬಾಳಿನಲ್ಲಿ ಅರಗಿಸಿಕೊಂಡ ಭಾರತೀಯ ಹೆಣ್ಣುಮಗಳು.

ವಸುಧೇಂದ್ರರು ಆಧುನಿಕ ಸಮಾಜದಲ್ಲಿಯ ಅಸಹಾಯಕರ ಕತೆಗಳನ್ನೂ ಸಹ ಕೊಟ್ಟಿದ್ದಾರೆ. “ ಕ್ಷಿತಿಜ ಹಿಡಿಯ ಹೊರಟವರಾರು, ಹೆಡ್ ಹಂಟರ, ಕಣ್ತೆರದು ನೋಡಲ್ಲಿ ಗೆದ್ದಲು ಮರ ಕೆಡವಲಿದೆ, ಗುಳ್ಳೆ ” ಮುಂತಾದವು ಆಧುನಿಕ ಸಮಾಜದಲ್ಲಿಯ ಅಸಹಾಯಕರ ಕತೆಗಳು. ಆಧುನಿಕ ಸಮಾಜದ ಆರ್ಥಿಕ ಆಸೆಬುರುಕತನ ಈ ಎಲ್ಲ ಕತೆಗಳಿಗೆ ಹಿನ್ನೆಲೆಯಾಗಿದೆ.

ಇವಲ್ಲದೆ, ಮತ್ತೊಂದು ವರ್ಗದ ಅಸಹಾಯಕ ಜೀವಿಗಳ ಕತೆಯೂ ಇಲ್ಲಿವೆ. ಸಮಾಜದ ಚೌಕಟ್ಟಿಗೆ ಸಂಬಂಧವಿರದೆ, ತನ್ನೊಳಗಿನ ವೈಯಕ್ತಿಕ ಅಥವಾ ಆರ್ಥಿಕ ಕಾರಣದಿಂದಾಗಿ ಕಷ್ಟಪಡುತ್ತಿರುವ ಅಸಹಾಯಕ ಜೀವಿಗಳ ಕತೆಗಳಿವು.

“ ಅಪಸ್ವರದಲ್ಲೊಂದು ಆರ್ತನಾದ ” ಕತೆಯಲ್ಲಿ ಮನೆಯ ಪರಿಸ್ಥಿತಿಯಿಂದಾಗಿ, ಮದುವೆಯಾಗದೇ ಇರುವ ಒಬ್ಬಳು ಹುಡುಗಿ ಹಾಗೂ ಅವಳ ವಿಧವೆ ಅಮ್ಮನ ತೊಳಲಾಟಗಳ ಚಿತ್ರಣವಿದೆ.
“ ಅನಘ ” ಕತೆಯಲ್ಲಿ ಹಳ್ಳಿಯಲ್ಲಿರುವ transvestite ಹುಡುಗನೊಬ್ಬನ ಸಮಸ್ಯೆಯ ಚಿತ್ರಣವಿದೆ. ಈ ಕತೆಯಲ್ಲಿ ಹುಡುಗನ ಬಲಹೀನತೆ ಹಾಗು ಅವನ ಅಪ್ಪನ ಪೌರುಷಗಳಿಗೆ ಮುಖಾಮುಖಿಯಾಗಿ ನಿಲ್ಲುವದು ಸೂಳೆಯೊಬ್ಬಳಲ್ಲಿ ಮಿನಗುತ್ತಿರುವ ಮಾನವೀಯತೆ.
“ಯುಗಾದಿ” ಕತೆಯಲ್ಲಿ ಬದಲಾದ ಸಾಮಾಜಿಕ ಮೌಲ್ಯಗಳಿಂದಾಗಿ ಒದ್ದಾಡುತ್ತಿರುವ ಹಿರಿಯ ಜೀವಿಯೊಬ್ಬನ ಅಸಹಾಯಕತೆಯ ಚಿತ್ರಣವಿದೆ. ಇಲ್ಲಿಯೂ ಸಹ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಕೆಳಸ್ತರದಲ್ಲಿರುವ ವ್ಯಕ್ತಿಗಳು ಉಳಿಸಿಕೊಂಡು ಬಂದಿರುವ ಸಾಂಪ್ರದಾಯಕ ಮೌಲ್ಯಗಳೇ ಕತೆಯ ತಿರುಳಾಗಿವೆ.

ಹಾಗಾದರೆ, ವಸುಧೇಂದ್ರರ ಕತೆಗಳು ಕೇವಲ ಅಸಹಾಯಕರ ಕತೆಗಳೇ ಎನ್ನುವ ಸಂದೇಹ ಬರಬಹುದು.
ನಿಜ ಹೇಳಬೇಕೆಂದರೆ, ವಸುಧೇಂದ್ರರ ಕತೆಗಳು ಮೌಲ್ಯವನ್ನು ಹುಡುಕುತ್ತಿರುವ ಕತೆಗಳು.
ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಬಲಹೀನರಾದವರಲ್ಲಿಯೇ ಅಂದರೆ ಶೋಷಣೆಗೆ ಒಳಗಾದವರಲ್ಲಿಯೇ ಈ ಮೌಲ್ಯಗಳು ಉಳಿದುಕೊಂಡಿರುವದು ಈ ಕತೆಗಳಲ್ಲಿಯ ವೈಶಿಷ್ಟ್ಯ.

ವಸುಧೇಂದ್ರರು ಮೌಲ್ಯಗಳನ್ನು ಹುಡುಕಲು ಬಲಹೀನರನ್ನೇ ಆರಿಸಿಕೊಳ್ಳುತ್ತಾರೆಯೇ ಎನ್ನುವ ಪ್ರಶ್ನೆಯೂ ಬರಬಹುದು. ಆದರೆ ಇದು ಕೇವಲ ಸಾಂದರ್ಭಿಕ. ವಸುಧೇಂದ್ರರರದು ಸೂಕ್ಷ್ಮ ಸಂವೇದನಾ ಮನಸ್ಸು. ಎಲ್ಲೇ ಸಂತಾಪ ಕಾಣಲಿ, ಅವರ ಮನ ಮಿಡಿಯುತ್ತದೆ. ಅದರ ಫಲವೇ ಈ ಕತೆಗಳು.

ವಸುಧೇಂದ್ರರ ಕತೆಗಳು ಅವರ ಆಪ್ತ ಪರಿಸರದಿಂದ ಹೊಮ್ಮಿವೆ. ಸಾಂಪ್ರದಾಯಕ ಸಮಾಜದ ಕತೆಗಳೆಲ್ಲ ಸಂಡೂರಿನ ಸುತ್ತಮುತ್ತಲಿನ ಕತೆಗಳು. ಇಲ್ಲಿಯ ಪರಿಸರವನ್ನು ವಿನೋದಪೂರ್ಣವಾಗಿ ಕಟ್ಟಿಕೊಡುವದರಲ್ಲಿ ವಸುಧೇಂದ್ರರು ಯಶಸ್ವಿಯಾಗಿದ್ದಾರೆ. ಈ ಕತೆಗಳು ಸಾಂಪ್ರದಾಯಕ ಸಮಾಜದ ಕೊಳಕನ್ನು ತೋರಿಸುವಂತೆಯೇ, ಆ ಸಮಾಜವು ನೀಡಿದ ಮೌಲ್ಯಗಳನ್ನೂ ತೋರಿಸುತ್ತವೆ.
ಆಧುನಿಕ ಸಮಾಜದ ಕತೆಗಳೆಲ್ಲ ಬೆಂಗಳೂರು ನಗರದ ಕತೆಗಳು. ದುಡ್ಡೇ ದೊಡ್ಡಪ್ಪ ಎನ್ನುವದೇ ಇಲ್ಲಿಯ ಮೌಲ್ಯ.
ತೆಳುವಿನೋದದ ತಿಳಿಲೇಪನವಿರುವದರಿಂದ ವಸುಧೇಂದ್ರರ ಕತೆಗಳಲ್ಲಿಯ ಸಂಕಟವು ಸಹನೀಯವಾಗಿದೆ.


ರೈಲ್ವೆ ಗ್ರೂಪ್ ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿ ಅಕ್ಟೋಬರ್ 15 ರಂದು ನಡೆದ ಜಾಥಾ- ಗೃಹ ಮಂತ್ರಿಗೆ ನೀಡಿದ ಮನವಿ ಪತ್ರ
ಕ ರ ವೇ - ಬುಧವಾರ ೦೯:೧೫, ಅಕ್ಟೋಬರ್ ೧೫, ೨೦೦೮





ಕಾರಂತರ ಜೀವಂತ ಪಾತ್ರಗಳು ೧೩ (೨)
ಸಂಪದ - 'ಹೊಸ ಚಿಗುರು, ಹಳೆ ಬೇರು' - ಬುಧವಾರ ೦೮:೨೬, ಅಕ್ಟೋಬರ್ ೧೫, ೨೦೦೮

ಕಾದಂಬರಿ ತೊಡಗುವುದೇ ’ಹಂದಿಗೋಣ’ ಎಂಬ ಹಂದಿಯೂ ಅಲ್ಲದ ಕೋಣವೂ ಅಲ್ಲದ ವಿಚಿತ್ರವಾದೊಂದು ಹೆಸರಿನ ಊರಿನಿಂದ , ಗೋಕರ್ಣದ ಸಮೀಪದ ಆ ಊರಿಗೆ ಮೂರೂರಿನ ರಾಮಕೃಷ್ಣಯ್ಯನವರ ತಂಗಿಯನ್ನು ಕೊಟ್ಟಿರುತ್ತದೆ .  ಮುಂದೆ ಓದಿ »


ಮಳೆ
nagarahalli-manadabayalu - ಬುಧವಾರ ೦೮:೨೩, ಅಕ್ಟೋಬರ್ ೧೫, ೨೦೦೮

ಮಾಯದ ಲೋಕವೇ ಈ ಭುವಿಯು,
ಚಿತ್ತವ ಚದುರಿಸೂ ಬಣ್ಣದ ಲೋಕವು.

ಹಸಿ ಹಸಿರು ಭುವಿಯ ಒಡಲು,
ನೋಡಲು ಮೇಲೆ ಚೆಂದದ ಕಾರ್ಮುಗಿಲು.

ಬೆಳ್ಳಿಯ ಗೆರೆ ನಡುವುದು ಹೊಳೆದಿರೆ,
ಕಳೆಯಿತು ಭುವಿಗಂಟಿದ ಕೊಳೆಯು.

ಮಳೆಯೋ ಮಳೆಯೋ ಭುವಿಗಿಳಿಯಿತು.
ಬಯಸದೆ ಬಂದ ಇನಿಯನ ಪರಿಯೂ!


ರೈಲ್ವೆ ಗ್ರೂಪ್ ಡಿ ನೌಕರರ ನೇಮಕಾತಿಯಲ್ಲಿ ಕನ್ನಡಿಗರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿ ಜಾಥಾ
ಕ ರ ವೇ - ಬುಧವಾರ ೦೮:೧೭, ಅಕ್ಟೋಬರ್ ೧೫, ೨೦೦೮

ರೈಲ್ವೆ ಗ್ರೂಪ್ ಡಿ ನೌಕರರ ನೇಮಕಾತಿಯಲ್ಲಿ ಕನ್ನಡಿಗರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಜಾಥಾವನ್ನು ಹಮ್ಮಿಕೊಂಡಿದ್ದೆವುಹುಬ್ಬಳ್ಳಿ, ಕಲ್ಬುರ್ಗಿ ಮತ್ತು ಬಳ್ಳಾರಿಯಲ್ಲಿಯೂ ಕೂಡ ರೈಲ್ವೆ ಗ್ರೂಪ್ ಡಿ ನೌಕರರ ನೇಮಕಾತಿಯಲ್ಲಿ ಕನ್ನಡಿಗರಿಗೆ ಕೆಲಸ ಸಿಗದಿದ್ದಲ್ಲಿ, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.













ದಸರ ಹಬ್ಬ ಆಚರಿಸಿದ ಕ್ರೈಸ್ತ ಸಮುದಾಯ..
ಸಂಪದ - 'ಹೊಸ ಚಿಗುರು, ಹಳೆ ಬೇರು' - ಬುಧವಾರ ೦೮:೦೦, ಅಕ್ಟೋಬರ್ ೧೫, ೨೦೦೮

ಒಂದು ಚೆನ್ನಾದ ಸುದ್ದಿ ನಮ್ಮ ಮಂಗಳೂರಿನಿಂದ.

ದಸರ ಹಬ್ಬ ಆಚರಿಸಿದ ಕ್ರೈಸ್ತ ಸಮುದಾಯ...
ಹೆಚ್ಚಿನ ಮಾಹಿತಿ ಮತ್ತು ಚಿತ್ರಗಳಿಗಾಗಿ ಇಲ್ಲ್ಲಿ ನೋಡಿ...
http://www.daijiworld.com/news/news_disp.asp?n_id=52341  ಮುಂದೆ ಓದಿ »


ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
ಸಂಪದ - 'ಹೊಸ ಚಿಗುರು, ಹಳೆ ಬೇರು' - ಬುಧವಾರ ೦೭:೧೩, ಅಕ್ಟೋಬರ್ ೧೫, ೨೦೦೮

ನಿಮ್ಮ ಮನೆ ಪಕ್ಕದಲ್ಲಿ ತುಂಬಾ ಸ್ಥಿತಿವಂತರು ಇದ್ದಾರೆ ಅಂತ ಇಟ್ಟುಕೊಳ್ಳಿ...
ಅವರು ಆಗಾಗ ನಿಮಗೆ ತುಂಬಾನೆ ಸಹಾಯ ಮಾಡ್ತಾರೆ ಅಂತ ಇಟ್ಟುಕೊಳ್ಳಿ...
ಒಂದು ಸರತಿ ನಿಮ್ಮ ಮನೆ ಒಳಗೆ ಗಲಾಟೆ ನಡೆಯತ್ತೆ ಅಂತ ಇಟ್ಟುಕೊಳ್ಳಿ, ಉದಾ: ಗಂಡ-ಹೆಂಡತಿ ಗಲಾಟೆ.  ಮುಂದೆ ಓದಿ »


೧೦ ಮುಂದೆ› ಕೊನೆ»

“ಕನ್ನಡಲೋಕ” ದಲ್ಲಿ ಕಾಣಿಸಿಕೊಳ್ಳುವ ಲೇಖನಗಳ ಹಕ್ಕು ಮತ್ತು ಹೊಣೆ ಆಯಾ ತಾಣಗಳ ಲೇಖಕರು/ನಿರ್ವಾಹಕರಿಗೆ ಸೇರಿದ್ದು. ನಿಮ್ಮ ಅಂತರ್ಜಾಲ ತಾಣವನ್ನು “ಕನ್ನಡಲೋಕ” ದಲ್ಲಿ ಸೇರಿಸಲು ನಮಗೆ ಮಿಂಚೆ ಮಾಡಿ.